ಆಕಾಶವೆ ಬೀಳಲಿ ಮೇಲೆ
ಆಕಾಶವೆ ಬೀಳಲಿ ಮೇಲೆ ನಾನೆಂದು ನಿನ್ನವನು
ಭೂಮಿಯೆ ಬಾಯ್ಬಿಡಲಿ ಇಲ್ಲೇ ನಾನಿನ್ನ ಕೈ ಬಿಡೆನು
ನೀನಿರುವುದೆ ನನಗಾಗಿ, ಈ ಜೀವ ನಿನಗಾಗಿ
ಆಕಾಶವೆ ಬೀಳಲಿ ಮೇಲೆ ನಾನೆಂದು ನಿನ್ನವನು
ಹೆದರಿಕೆಯ ನೋಟವೇಕೆ ಒಡನಾಡಿ ನಾನಿರುವೆ
ಹೊಸ ಬಾಳಿನ ಹಾದಿಯಲ್ಲಿ ಜೊತೆಗೂಡಿ ನಾ ಬರುವೆ
ಕಲ್ಲಿರಲಿ ಮುಳ್ಳೇ ಇರಲಿ ನಾ ಮೊದಲು ಮುನ್ನಡೆವೆ
ನೀನಡಿಯ ಇಡುವೆಡೆಯಲ್ಲಿ ಒಲವಿನ ಹೂಹಾಸುವೆ
ಈ ಮಾತಿಗೆ ಮನವೇ ಸಾಕ್ಷಿ ಈ ಭಾಷೆಗೆ ದೇವರೆ ಸಾಕ್ಷಿ
ಇನ್ನಾದರೂ ನನ್ನಾ ನಂಬಿ ನಗೆಯ ಚೆಲ್ಲು ಚೆಲುವೆ
ಆಕಾಶವೆ ಬೀಳಲಿ ಮೇಲೆ ನಾನೆಂದು ನಿನ್ನವನು
ಭೂಮಿಯೆ ಬಾಯ್ಬಿಡಲಿ ಇಲ್ಲೇ ನಾನಿನ್ನ ಕೈ ಬಿಡೆನು
ಹಸೆಮಣೆಯು ನಮಗೆ ಇಂದು ನಾವು ನಿಂತ ತಾಣವು
ತೂಗಾಡುವ ಹಸಿರೆಲೆಯೇ ಶುಭ ಕೋರುವ ತೋರಣವು
ಹಕ್ಕಿಗಳ ಚಿಲಿಪಿಲಿ ಗಾನ ಮಂಗಳಕರ ನಾದವು
ಈ ನದಿಯ ಕಲರವವೇ ಮಂತ್ರಗಳ ಘೋಷವು
ಸಪ್ತಪದಿ ಈ ನಡೆಯಾಯ್ತು, ಸಂಜೆರಂಗು ಆರತಿಯಾಯ್ತು
ಇಂದೀಗ ಎರಡೂ ಜೀವ ಬೇರೆತೂ ಸ್ವರ್ಗವಾಯ್ತು
ಆಕಾಶವೆ ಬೀಳಲಿ ಮೇಲೆ ನಾನೆಂದು ನಿನ್ನವನು
ಭೂಮಿಯೆ ಬಾಯ್ಬಿಡಲಿ ಇಲ್ಲೇ ನಾನಿನ್ನ ಕೈ ಬಿಡೆನು
ನೀನಿರುವುದೆ ನನಗಾಗಿ, ಈ ಜೀವ ನಿನಗಾಗಿ
ಚಿತ್ರ: ನ್ಯಾಯವೇ ದೇವರು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್ ಮತ್ತು ನಾಗೇಂದ್ರ
ಗಾಯನ: ಪಿ. ಬಿ. ಶ್ರೀನಿವಾಸ್
ಭೂಮಿಯೆ ಬಾಯ್ಬಿಡಲಿ ಇಲ್ಲೇ ನಾನಿನ್ನ ಕೈ ಬಿಡೆನು
ನೀನಿರುವುದೆ ನನಗಾಗಿ, ಈ ಜೀವ ನಿನಗಾಗಿ
ಆಕಾಶವೆ ಬೀಳಲಿ ಮೇಲೆ ನಾನೆಂದು ನಿನ್ನವನು
ಹೆದರಿಕೆಯ ನೋಟವೇಕೆ ಒಡನಾಡಿ ನಾನಿರುವೆ
ಹೊಸ ಬಾಳಿನ ಹಾದಿಯಲ್ಲಿ ಜೊತೆಗೂಡಿ ನಾ ಬರುವೆ
ಕಲ್ಲಿರಲಿ ಮುಳ್ಳೇ ಇರಲಿ ನಾ ಮೊದಲು ಮುನ್ನಡೆವೆ
ನೀನಡಿಯ ಇಡುವೆಡೆಯಲ್ಲಿ ಒಲವಿನ ಹೂಹಾಸುವೆ
ಈ ಮಾತಿಗೆ ಮನವೇ ಸಾಕ್ಷಿ ಈ ಭಾಷೆಗೆ ದೇವರೆ ಸಾಕ್ಷಿ
ಇನ್ನಾದರೂ ನನ್ನಾ ನಂಬಿ ನಗೆಯ ಚೆಲ್ಲು ಚೆಲುವೆ
ಆಕಾಶವೆ ಬೀಳಲಿ ಮೇಲೆ ನಾನೆಂದು ನಿನ್ನವನು
ಭೂಮಿಯೆ ಬಾಯ್ಬಿಡಲಿ ಇಲ್ಲೇ ನಾನಿನ್ನ ಕೈ ಬಿಡೆನು
ಹಸೆಮಣೆಯು ನಮಗೆ ಇಂದು ನಾವು ನಿಂತ ತಾಣವು
ತೂಗಾಡುವ ಹಸಿರೆಲೆಯೇ ಶುಭ ಕೋರುವ ತೋರಣವು
ಹಕ್ಕಿಗಳ ಚಿಲಿಪಿಲಿ ಗಾನ ಮಂಗಳಕರ ನಾದವು
ಈ ನದಿಯ ಕಲರವವೇ ಮಂತ್ರಗಳ ಘೋಷವು
ಸಪ್ತಪದಿ ಈ ನಡೆಯಾಯ್ತು, ಸಂಜೆರಂಗು ಆರತಿಯಾಯ್ತು
ಇಂದೀಗ ಎರಡೂ ಜೀವ ಬೇರೆತೂ ಸ್ವರ್ಗವಾಯ್ತು
ಆಕಾಶವೆ ಬೀಳಲಿ ಮೇಲೆ ನಾನೆಂದು ನಿನ್ನವನು
ಭೂಮಿಯೆ ಬಾಯ್ಬಿಡಲಿ ಇಲ್ಲೇ ನಾನಿನ್ನ ಕೈ ಬಿಡೆನು
ನೀನಿರುವುದೆ ನನಗಾಗಿ, ಈ ಜೀವ ನಿನಗಾಗಿ
ಚಿತ್ರ: ನ್ಯಾಯವೇ ದೇವರು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್ ಮತ್ತು ನಾಗೇಂದ್ರ
ಗಾಯನ: ಪಿ. ಬಿ. ಶ್ರೀನಿವಾಸ್
Tag: Akashave bilali mele, Aakashave beelali mele
ಕಾಮೆಂಟ್ಗಳು