ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಕೃಷ್ಣಮೂರ್ತಿ ಕಣ್ಣಮುಂದೆ



ಕೃಷ್ಣಮೂರ್ತಿ ಕಣ್ಣಮುಂದೆ ನಿಂತಿದ್ದಂತಿದೆ
ಕಷ್ಟಗಳೆಲ್ಲವ ಪರಿಹರಿಸಿ ಮನ
ದಿಷ್ಟಾರ್ಥಗಳನೆಲ್ಲ ಕೊಟ್ಟು ರಕ್ಷಿಸುವಂಥ

ಮಸ್ತಕದಲಿ ಮಾಣಿಕದ ಕಿರೀಟ
ಕಸ್ತೂರಿ ತಿಲಕದಿ ಹೊಳೆವ ಲಲಾಟ
ಶಿಸ್ತಿಲಿ ಕೊಳಲ ಊದುವ ಓರೆನೋಟ
ಕೌಸ್ತುಭ ಎಡಬಲದಲ್ಲಿ ಓಲಾಟ

ಮಘಮಘಿಸುವ ಸೊಬಗಿನ ಸುಳಿಗುರುಳು
ಚಿಗುರು ತುಳಸಿವನ ಮಾಲೆಯ ಕೊರಳು
ಬಗೆಬಗೆ ಹೊನ್ನ ಮುದ್ರಿಕೆಯಿಟ್ಟ ಬೆರಳು
ಸೊಬಗಿನ ನಾಭಿಯ ತಾವರೆ ಅರಳು

ಉಡುದಾರ ಒಡ್ಯಾಣ ಸಕಲಾಭರಣ
ಬೆಡಗು ಪೀತಾಂಬರ ಶತರವಿ ಕಿರಣ
ಕಡಗ ಗಗ್ಗರಿಪೆಂಡೆಗಳನಿಟ್ಟ ಚರಣ
ಒಡೆಯ ಪುರಂದರವಿಠಲನ ಕರುಣ

ಸಾಹಿತ್ಯ: ಪುರಂದರದಾಸರು



Tag: Krishnamurthy kannamunde 

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ