ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ದೀಪ

ದೀಪ

ಬಂತಿದೊ ಶೃಂಗಾರಮಾಸ
ಕಂತು ನಕ್ಕ ಚಂದ್ರಹಾಸ
ಎಂತು ತುಂಬಿತಾsಕಾಶ
ಕಂಡವರನು ಹರಸಲು.

ಕಿರಿಬೆರಳಲಿ ಬೆಳ್ಳಿಹರಳು
ಕರಿಕುರುಳೊಳು ಚಿಕ್ಕೆ ಅರಳು
ತೆರಳಿದಳಿದೊ ತರಳೆ ಇರುಳು
ತನ್ನರಸನನರಸಲು.

ಗಂಗೆ ಯಮುನೆ ಕೂಡಿ ಹರಿದು
ಸಂಗಮ ಜಲ ಬಿಳಿದು ಕರಿದು
ತಿಂಗಳ ನಗೆ ಮೇರೆವರಿದು
ಬೇರೆ ಮಿರುಗು ನೀರಿಗು.

ಪಂಥದಿಂದ ಮನೆಯ ತೊರೆದು
ಪಾಂಥ ನೆನೆದನತ್ತು ಕರೆದು :
ಇಂಥ ಸಮಯ ಬೇರೆ ಬರದು
ದಂಪತಿಗಳಿಗಾರಿಗು !

ನಾನು ನೀನು ಜೊತೆಗೆಬಂದು
ಈ ನದಿಗಳ ತಡಿಗೆ ನಿಂದು
ಸಾನುರಾಗದಿಂದ ಇಂದು
ದೀಪ ತೇಲಿಬಿಟ್ಟೆವೇ
ದೀಪ ತೇಲಿ ಬಿಟ್ಟೆವು.

ಸಾಹಿತ್ಯ: ಅಂಬಿಕಾತನಯದತ್ತ



Tag: Deepa

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ