ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಶ್ರೀನಿವಾಸ ನೀನೇ ಪಾಲಿಸೋ


ಶ್ರೀನಿವಾಸ ನೀನೇ ಪಾಲಿಸೋ ಶೃತಜನ ಪಾಲ
ಗಾನಲೋಲ ಶ್ರೀ ಮುಕುಂದನೇ

ಧ್ಯಾನ ಮಾಳ್ಪ ಸಜ್ಜನರ ಮಾನದಿಂ ಪರಿಪಾಲಿಪ
ವೇಣುಗೋಪಾಲ ಮುಕುಂದ ವೇದವೇದ್ಯ ನಿತ್ಯಾನಂದ

ಎಂದಿಗೆ ನಿನ್ನ ಪಾದಾಬ್ಜವ ಪೊಂದುವ ಸುಖ
ಎಂದಿಗೆ ಲಭ್ಯವೋ ಮಾಧವ
ಅಂಧಕಾರಣ್ಯದಲ್ಲಿ ನಾನು 
ನಿಂದು ತತ್ತರಿಸುತಿಹೆನೊ ಮುಕುಂದ

ಎಷ್ಟು ದಿನ ಕಷ್ಟ ಪಡುವುದೋ ಯಶೋದೆ ಕಂದ
ದೃಷ್ಟಿಯಿಂದ ನೋಡಲಾಗದೆ
ಮುಟ್ಟಿ ನಿನ್ನ ಭಜಿಸಲಾರೆ ಕೆಟ್ಟ ನರಜನ್ಮದವ
ದುಷ್ಟ ಕಾರ್ಯ ಮಾಡಿದಾಗ್ಯು ಇಷ್ಟನಾಗಿ ಕಯ್ಯ ಪಿಡಿದು

ಅನುದಿನ ಅನೇಕ ರೋಗಂಗಳ ಅನುಭವಿಸುವೆನು
ಘನ ಮಹಿಮನೆ ಕೇಳಯ್ಯ ತನುವಿನಲ್ಲಿ ಬಲವಿಲ್ಲ
ನೆನೆದ ಮಾತ್ರ ಸಲಹುವ
ಹನುಮದೀಶ ಪುರಂದರ ವಿಟ್ಠಲನೇ ಕಯ್ಯ ಪಿಡಿದು

Tag: Srinivasa Neene Paliso

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ