ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಕನ್ನಡ ಸಾಹಿತ್ಯ ತೋಟ


ಕೈಬೀಸಿ ಕರೆದಿಹುದು ಸಾಹಿತ್ಯ ತೋಟ
ಕಣ್ಸೆಳೆಯೆ ದಕ್ಕುವುದು ತಂಪಿನ ನೋಟ

ಹಣ್ಣುಂಟು ಕಾಯುಂಟು ಹೀಚುಗಾಯಿಗಳು

ಕಂಪನ್ನು ಚೆಲ್ಲುವ ಬಗೆಬಗೆಯ ಹೂಗಳು



ಕುವೆಂಪು ಬೇಂದ್ರೆಯಿಹ ಕನ್ನಡವೇ ಚೆನ್ನ

ಮಂಕುತಿಮ್ಮನ ನೀನು ಮರೆಯಬೇಡಣ್ಣ
ಅನಕೃ ತರಾಸು ತೇಜಸ್ವಿ ಜೊತೆಗೆ
ಬಲ್ಲಾಳ ಕಾರಂತ ಚಿತ್ತಾಲರೆಡೆಗೆ



ತ್ರಿವೇಣಿ ಸಾಯಿಸುತೆ ಇಂದಿರೆಯ ನೆನೆದು

ವೈದೇಹಿ ಅನುಪಮಾ ಸುಧೆಯನ್ನು ಮೊಗೆದು
ಭೈರಪ್ಪ ಪುತಿನ ಮಾಸ್ತಿ ಗೊರೂರು
ಸರಸತಿಯ ಮಕ್ಕಳಿಗೆ ಸಾಟಿ ಯಾರಿಹರು



ಬಂಡಾಯ ಕಹಳೆಯ ಸಿದ್ಧಲಿಂಗಯ್ಯ

ಗಾಂಧಿಕ್ಲಾಸಿನ ಕುಂವೀ ನಮ್ಮವರೇ ಅಯ್ಯಾ
ವಿವೇಕ ಜಯಂತ ವಸುಧೇಂದ್ರ ಇಷ್ಟ
ಓದದೇ ಉಳಿದರೆ ನಮಗೆಯೇ ನಷ್ಟ...



ಸಾಹಿತ್ಯ: ತ್ರಿವೇಣಿ ರಾವ್

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ