ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಬಿಡು ಬಾಹ್ಯದೊಳು ಡಂಭವ


ಬಿಡು ಬಾಹ್ಯದೊಳು ಡಂಭವ
ಮಾನಸದೊಳು ಎಡೆಬಿಡದಿರು ಶಂಭುವ.
ಮನದೊಳು ವಂಚಿಸಿ ಹೊರಗೆ ನೀ ಕೀರ್ತಿಯ
ಪಡೆದರೆ ಶಿವ ನಿನಗೊಲಿಯನು ಮರುಳೆ.

ಜನಕಂಜಿ ನಡೆಕೊಂಡರೇನುಂಟು ಲೋಕದಿ
ಮನಕಂಜಿ ನಡೆಕೊಂಬುದೇ ಚಂದ.
ಜನರೇನ ಬಲ್ಲರು ಒಳಗಾಗೋ ಕೃತ್ಯವ
ಮನವರಿಯದ ಕಳ್ಳತನವಿಲ್ಲವಲ್ಲ.

ಮನದಲಿ ಶಿವ ತಾ ಮನೆಮಾಡಿಕೊಂಡಿಹ
ಮನಮೆಚ್ಚಿ ನಡೆದರೆ ಶಿವ ತಾ ಮೆಚ್ಚುವ.
ಮನಕಂಜಿ ನಡೆಯದೆ ಜನಕಂಜಿ ನಡೆದರೆ
ಮನದಾಣ್ಮ ಗುರುಸಿದ್ಧ ಮರೆಯಾಗೋನಲ್ಲ.

ಸಾಹಿತ್ಯ: ಸರ್ಪಭೂಷಣ ಶಿವಯೋಗಿಗಳು


Tag: Bidu bahyadolu dambava

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!
Emotions
Copy and paste emojis inside comment box

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ