ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ನೀ ಸಿಗದೇ ಬಾಳೊಂದು ಬಾಳೇ ಕೃಷ್ಣಾ




ನೀ ಸಿಗದೇ ಬಾಳೊಂದು ಬಾಳೇ ಕೃಷ್ಣಾ
ನಾ ತಾಳಲಾರೆ ಈ ವಿರಹತೃಷ್ಣಾ

ಕಮಲವಿಲ್ಲದ ಕೆರೆ ನನ್ನ ಬಾಳು;
ಚಂದ್ರ ಇಲ್ಲದ ರಾತ್ರಿ ಬೀಳು;
ನೀ ಸಿಗದೆ ಉರಿ ಉರಿ ಕಳೆದೆ ಇರುಳ
ಮಾತಿಲ್ಲ, ಬಿಗಿದಿದೆ ದುಃಖ ಕೊರಳ

ಅನ್ನ ಸೇರದು, ನಿದ್ದೆ ಬಂದುದೆಂದು?
ಕುದಿವೆ ಒಂದೇ ಸಮ ಕೃಷ್ಣಾ ಎಂದು;
ಯಾರು ಅರಿವರು ಹೇಳು ನನ್ನ ನೋವ
ತಲ್ಲಣಿಸಿ ಕೂಗುತಿದೆ ದಾಸಿ ಜೀವ

ಒಳಗಿರುವ ಗಿರಿಧರನೆ ಹೊರಗೆ ಬಾರೊ,
ಕಣ್ಣೆದುರು ನಿಂತು ಆ ರೂಪ ತೋರೊ;
ಜನುಮ ಜನುಮದ ರಾಗ ನನ್ನ ಪ್ರೀತಿ,
ನಿನ್ನೊಳಗೆ ಹರಿವುದೇ ಅದರ ರೀತಿ.

ಸಾಹಿತ್ಯ: ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ

ಗಾಯನ: ಪಲ್ಲವಿ



ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ