ಕರ್ನಾಟಕದ ಇತಿಹಾಸದಲಿ
ಕರ್ನಾಟಕದ ಇತಿಹಾಸದಲಿ
ಬಂಗಾರದ ಯುಗದ ಕಥೆಯನ್ನು
ಹಾಡುವೆ ಕೇಳಿ, ನಾ ಹಾಡುವೆ ಕೇಳಿ
ಕರ್ನಾಟಕದ ಇತಿಹಾಸದಲಿ
ಜ್ಞಾನದ ಜ್ಯೋತಿಯು ವಿದ್ಯಾರಣ್ಯರು
ಅನುಗ್ರಹಗೈದ ಭೂಮಿ ಇದು
ಹಕ್ಕ ಬುಕ್ಕರು ಆಳಿದರಿಲ್ಲಿ
ಹರುಷದ ಮಳೆಯನು ಎಲ್ಲೂ ಚೆಲ್ಲಿ;
ವಿಜಯದ ಕಹಳೆಯ ಊದಿದರು,
ವಿಜಯನಗರ ಸ್ಥಾಪನೆ ಮಾಡಿದರು
ಕರ್ನಾಟಕದ ಇತಿಹಾಸದಲಿ
ಬಂಗಾರದ ಯುಗದ ಕಥೆಯನ್ನು
ಹಾಡುವೆ ಕೇಳಿ ನಾ ಹಾಡುವೆ ಕೇಳಿ
ಗಂಡರ ಗಂಡ ಧೀರ ಪ್ರಚಂಡ
ಕೃಷ್ಣದೇವರಾಯ ಆಳಿದ ವೈಭವದೆ
ಕಲಿಗಳ ನಾಡು ಕವಿಗಳ ಬೀಡು
ಎನಿಸಿತು ಹಂಪೆಯು ಆ ದಿನದೆ;
ಕನ್ನಡ ಬಾವುಟ ಹಾರಿಸಿದ
ಮಧುರೆವರೆಗೂ ರಾಜ್ಯವ ಹರಡಿಸಿದ
ಕರ್ನಾಟಕದ ಇತಿಹಾಸದಲಿ
ಸಂಗೀತ ನಾಟ್ಯಗಳ ಸಂಗಮವಿಲ್ಲೇ,
ಶಿಲ್ಪ ಕಲೆಗಳ ತಾಣವಿದೇ.
ಭುವನೇಶ್ವರಿಯ ತವರೂರಿದೆ;
ಯತಿಗಳ ದಾಸರ ನೆಲೆ ನಾಡಿಲ್ಲೇ;
ಪಾವನ ಮಣ್ಣಿದು ಹಂಪೆಯದು
ಯುಗ ಯುಗ ಅಳಿಯದ ಕೀರ್ತಿಯಿದು.
ಕನ್ನಡ ಭೂಮಿ, ಕನ್ನಡ ನುಡಿಯು,
ಕನ್ನಡ ಕೀರ್ತಿ ಎಂದೆಂದೂ ಬಾಳಲಿ
ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಗೆಲ್ಗೆ
ಸಿರಿಗನ್ನಡಂ ಗೆಲ್ಗೆ....
ಚಿತ್ರ: ಕೃಷ್ಣ ರುಕ್ಮಿಣಿ
ಸಾಹಿತ್ಯ: ಆರ್. ಎನ್. ಜಯಗೋಪಾಲ್
ಸಂಗೀತ: ಕೆ. ವಿ. ಮಹದೇವನ್
ಗಾಯನ: ಎಸ್. ಪಿ. ಬಾಲಸುಬ್ರಹ್ಮಣ್ಯಂ
ಕಾಮೆಂಟ್ಗಳು