ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಇಷ್ಟು ದಿನ ಈ ವೈಕುಂಠ


ಇಷ್ಟು ದಿನ ಈ ವೈಕುಂಠ
ಎಷ್ಟು ದೂರವೋ ಎನುತಲಿದ್ದೆ

ದೃಷ್ಟಿಯಿಂದಲಿ ನಾನು ಕಂಡೆ

ಸೃಷ್ಟಿಧೀಶನೇ ಶ್ರೀರಂಗಶಾಯಿ



ಎಂಟು ಏಳನು ಕಳೆದುದರಿಂದೆ

ಬಂಟರೈವರ ತುಳಿದುದರಿಂದೆ
ತುಂಟಕನೊಬ್ಬನ ತರಿದುದರಿಂದೆ
ಬಂಟನಾಗಿ ಬಂದೆನೋ ಶ್ರೀರಂಗಶಾಯಿ

ವಜ್ರ ವೈಢೂರ್ಯದ ತೊಲೆಗಳ ಕಂಡೆ
ಪ್ರಜ್ವಲಿಪ ಮಹಾದ್ವಾರವ ಕಂಡೆ
ನಿರ್ಜರಾದಿ ಮುನಿಗಳ ನಾ ಕಂಡೆ
ದುರ್ಜನಾಂತಕನೆ ಶ್ರೀರಂಗಶಾಯಿ

ರಂಭೆ ಊರ್ವಶಿ ಮೇಳವ ಕಂಡೆ
ತುಂಬುರು ಮುನಿ ನಾರದರನು ಕಂಡೆ
ಅಂಬುಜೋದ್ಭವ ರುದ್ರರ ಕಂಡೆ
ಶಂಬರಾರಿಪಿತನೆ ಶ್ರೀರಂಗಶಾಯಿ

ನಾಗಶಯನನ ಮೂರುತಿ ಕಂಡೆ
ಭೋಗಿಭೂಷಣ ಶಿವನನು ಕಂಡೆ
ಭಾಗವತರ ಸಮ್ಮೇಳವ ಕಂಡೆ
ಕಾಗಿನೆಲೆಯಾದಿಕೇಶವನ ನಾ ಕಂಡೆ


ಸಾಹಿತ್ಯ: ಕನಕದಾಸರು
ಗಾಯನ: ವಿದ್ಯಾಭೂಷಣರು



ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ