ನಂದ ತನಯ ಗೋವಿಂದನ
ನಂದ ತನಯ ಗೋವಿಂದನ ಭಜಿಸುವ ಆನಂದವಾದ ಮಿಠಾಯಿ
ಬಂಧಗಳನು ಭವ ರೋಗಗಳೆಲ್ಲನು ನಿಂದಿಪುದು ಈ ಮಿಠಾಯಿ
ದಧಿ ಘೃತ ಕ್ಷೀರಂಗಳಿಗಿಂತಲೂ ಬಹು ಅಧಿಕವಾದ ಮಿಠಾಯಿ
ಕದಳೀ ದ್ರಾಕ್ಷಿ ಖರ್ಜೂರ ರಸಗಳನು ಮೀರುವುದು ಈ ಮಿಠಾಯಿ
ಪಂಚ ಭಕ್ಷ್ಯಂಗಳ ಷಡ್ರಸಾನ್ನಗಳ ಮಿಂಚಿದಂಥ ಮಿಠಾಯಿ
ಕಂಚೀಶನೆ ರಕ್ಷಿಸು ಎಂದುಸುರುವರ ಅಂಜಿಕೆ ಬಿಡಿಪ ಮಿಠಾಯಿ
ಜಪ ತಪ ಸಾಧನಗಳಿಗಿಂತಲೂ ಬಹು ಅಪರೂಪದ ಮಿಠಾಯಿ
ಜಿಪುಣ ಮತಿಗಳಿಗೆ ಸಾಧ್ಯವಲ್ಲದಿಹ ಪುರಂದರ ವಿಠಲ ಮಿಠಾಯಿ
ಸಾಹಿತ್ಯ: ಪುರಂದರದಾಸರು
ಕಾಮೆಂಟ್ಗಳು