ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ದಣಿದ ಜೀವಕೆ ಮತ್ತೆ



ದಣಿದ ಜೀವಕೆ ಮತ್ತೆ

ದಣಿದ ಜೀವಕೆ ಮತ್ತೆ ಕನಸನುಣಿಸಿ
ಕುಣಿಸಿರುವ ನೀರೆ ನೀನು ಯಾರೆ ?
ಯಾರೆ ಚದುರೆ, ನೀನು ಯಾರೆ ಚದುರೆ ?
ಬಗೆಗಣ್ಣ ತೆರೆಸಿದ ಭಾವಮದಿರೆ

ಉರಿವ ಬಿಸಿಲಿಗೆ ತಂಪು ಗಾಳಿ ಸುಳಿಸಿ
ಮಣ್ಣಿನಲಿ ಮಳೆಬಿಲ್ಲ ಬಣ್ಣ ಕಲೆಸಿ,
ಮಾತಿನಾಳಕೆ ಸಿಗದ ಉರಿಯ ಚಿಗುರ
ಬೊಗಸೆಗಣ್ಣಿನ ಪಾತಿಯಲ್ಲಿ ಬೆಳೆಸಿ,
ಏಕೆ ಕಾಡುವೆ ನೀನು ಯಾರೆ ಚದುರೆ
ನಿನ್ನ ಚೆಲುವಿಗೆ ಎಷ್ಟು ಸ್ವರ್ಗ ಇದಿರೆ ?

ದಾರಿ ಹುಡುಕಿದೆ ಹೇಗೆ ಚೆಲುವೆ ಈ ಮನೆಗೆ
ನೂರು ಕಳವಳ ಕಾಲು ಕಚ್ಚುವೆಡೆಗೆ ?
ಕಾರಿರುಳು ಕವಿದಿರಲು ಬಂದೆ ಹೇಗೆ
ಮೈತುಂಬ ಪ್ರೀತಿಯನು ತಂದೆ ಹೇಗೆ ?

ಸಾಹಿತ್ಯ: ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ
ಸಂಗೀತ: ಮೈಸೂರು ಅನಂತಸ್ವಾಮಿ

ಇಲ್ಲಿ ಕೇಳೋಣ
https://youtu.be/SJ6KCO-5-hM

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ