ದಣಿದ ಜೀವಕೆ ಮತ್ತೆ
ದಣಿದ ಜೀವಕೆ ಮತ್ತೆ
ದಣಿದ ಜೀವಕೆ ಮತ್ತೆ ಕನಸನುಣಿಸಿ
ಕುಣಿಸಿರುವ ನೀರೆ ನೀನು ಯಾರೆ ?
ಯಾರೆ ಚದುರೆ, ನೀನು ಯಾರೆ ಚದುರೆ ?
ಬಗೆಗಣ್ಣ ತೆರೆಸಿದ ಭಾವಮದಿರೆ
ಉರಿವ ಬಿಸಿಲಿಗೆ ತಂಪು ಗಾಳಿ ಸುಳಿಸಿ
ಮಣ್ಣಿನಲಿ ಮಳೆಬಿಲ್ಲ ಬಣ್ಣ ಕಲೆಸಿ,
ಮಾತಿನಾಳಕೆ ಸಿಗದ ಉರಿಯ ಚಿಗುರ
ಬೊಗಸೆಗಣ್ಣಿನ ಪಾತಿಯಲ್ಲಿ ಬೆಳೆಸಿ,
ಏಕೆ ಕಾಡುವೆ ನೀನು ಯಾರೆ ಚದುರೆ
ನಿನ್ನ ಚೆಲುವಿಗೆ ಎಷ್ಟು ಸ್ವರ್ಗ ಇದಿರೆ ?
ದಾರಿ ಹುಡುಕಿದೆ ಹೇಗೆ ಚೆಲುವೆ ಈ ಮನೆಗೆ
ನೂರು ಕಳವಳ ಕಾಲು ಕಚ್ಚುವೆಡೆಗೆ ?
ಕಾರಿರುಳು ಕವಿದಿರಲು ಬಂದೆ ಹೇಗೆ
ಮೈತುಂಬ ಪ್ರೀತಿಯನು ತಂದೆ ಹೇಗೆ ?
ಸಾಹಿತ್ಯ: ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ
ಸಂಗೀತ: ಮೈಸೂರು ಅನಂತಸ್ವಾಮಿ
ಇಲ್ಲಿ ಕೇಳೋಣ
https://youtu.be/SJ6KCO-5-hM
ಕಾಮೆಂಟ್ಗಳು