ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಉದಯವಾಗಲಿ


 ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು 

ರಾಜನ್ಯರಿಪು ಪರಶುರಾಮನಮ್ಮನ ನಾಡು
ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು
ಓಜೆಯಿಂ ಮೆರೆದರಸುಗಳ ಸಾಹಸದ ಸೂಡು
ತೇಜವನು ನಮಗೀವ ವೀರವೃಂದದ ಬೀಡು

ಲೆಕ್ಕಿಗಮಿತಾಕ್ಷರರು ಬೆಳೆದು ಮೆರೆದಿಹ ನಾಡು
ಜಕ್ಕಣನ ಶಿಲ್ಪ ಕಲೆಯಚ್ಚರಿಯ ಕರುಗೋಡು
ಚೊಕ್ಕ ಮತಗಳ ಸಾರಿದವರಿಗಿದು ನೆಲೆವೀಡು
ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು

ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು
ಕಾವೇರಿ ಗೋದೆಯರು ಮೈದೊಳೆವ ನಲುನಾಡು
ಆವಗಂ ಸ್ಫೂರ್ತಿಸುವ ಕಬ್ಬಿಗರ ನಡೆಮಾಡು
ಕಾವ ಗದುಗಿನ ವೀರನಾರಾಯಣನ ಬೀಡು.

ಸಾಹಿತ್ಯ:  ಹುಯಿಲಗೋಳ ನಾರಾಯಣ ರಾಯರು


ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ