ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಜಿ. ರಾಜಶೇಖರ್


 ಜಿ. ರಾಜಶೇಖರ್

ಜಿ. ರಾಜಶೇಖರ್ ಕನ್ನಡ ಸಾಹಿತ್ಯಲೋಕದ ಪ್ರಖ್ಯಾತ ವಿಮರ್ಶಕರಾಗಿ ಹೆಸರಾಗಿದ್ದವರು.

ಜಿ. ರಾಜಶೇಖರ್ ಅವರು 1946ರಲ್ಲಿ ಜನಿಸಿದರು. ಉಡುಪಿಯಲ್ಲಿ ಪದವಿವರೆಗಿನ ವಿದ್ಯಾಭ್ಯಾಸ ನಡೆಸಿ ಕೆಲಕಾಲ ಶಿಕ್ಷಕರಾಗಿ ಕೆಲಸಮಾಡಿ ಎಲ್ಐಸಿಯಲ್ಲಿ ಉದ್ಯೋಗಸ್ಥರಾದರು. 

ಜಿ. ರಾಜಶೇಖರ ಅವರು  ಸಾಹಿತ್ಯ-ಸಮಾಜ-ರಾಜಕಾರಣ ಕುರಿತಂತೆ ಹಾಗೂ ಕೋಮುವಾದವೂ ಸೇರಿದಂತೆ ಸಮಕಾಲೀನ ತುರ್ತಿನ ವಿದ್ಯಮಾನಗಳ ಬಗ್ಗೆ ನಿರಂತರವಾಗಿ ಬರೆಯತ್ತ ಬಂದಿದ್ದರು. 

ಜಿ . ರಾಜಶೇಖರ ಸಂಘಟನೆಯೊಳಗಿದ್ದೇ ಸೊವಿಯತ್ ರಷ್ಯಾದಲ್ಲಿ ಕಮ್ಯುನಿಷ್ಟರಿಂದಾದ ನರಮೇಧವನ್ನು ಅತ್ಯುಗ್ರ ಮಾತುಗಳಲ್ಲಿ ಖಂಡಿಸಿದವರು . ಅಡಿಗರ ಕಾವ್ಯದ ಪ್ರತಿಗಾಮಿತನವನ್ನು ತಿರಸ್ಕರಿಸುತ್ತಲೇ ಅದರ ಹೊರತಾದ ಕಾವ್ಯದ ನಿಜವಾದ ಸತ್ವವನ್ನು ತೋರಿಸಿಕೊಟ್ಟವರು.  ಅವರ ಬಗ್ಗೆ ಪಿ. ಲಂಕೇಶ್ “ನಮ್ಮ ರಾಜಶೇಖರ ಎಷ್ಟು ಒಳ್ಳೆಯ ವಿಚಾರವಂತ . ನಿಷ್ಟುರತೆ ಮತ್ತು ಬದುಕಿನ ಬಗ್ಗೆ ಪ್ರೀತಿಯನ್ನು ಇಟ್ಟುಕೊಂಡ ಆತ ಶ್ರೇಷ್ಠ ಚಿಂತನಕಾರ ಎನ್ನುವುದು ನನಗೆ ಹೆಮ್ಮೆಯನ್ನುಂಟು ಮಾಡಿದೆ" ಎನ್ನುತ್ತಿದ್ದರು. 

ಸಮಕಾಲೀನ ಕನ್ನಡದ ಪ್ರಮುಖ ವಿಮರ್ಶಕ- ಚಿಂತಕರೆಂದು ಮನ್ನಣೆ ಗಳಿಸಿದ್ದ ರಾಜಶೇಖರ ಅವರು ಎಡಪಂಥೀಯ ಧೋರಣೆಯನ್ನು ನಿಷ್ಠುರ ಆತ್ಮವಿಮರ್ಶೆಯೊಂದಿಗೆ ಕಸಿ ಮಾಡಿದವರು. ಕಾಗೋಡು ಸತ್ಯಾಗ್ರಹ, ಪರಿಸರ ಮತ್ತು ಸಮಾಜವಾದ, ಬರ್ಟೊಲ್ಟ್ ಬ್ರೆಕ್ಟ್ ಪರಿಚಯ, ದಾರು ಪ್ರತಿಮ ನ ಪೂಜಿವೇ (ಅನುವಾದ), ಕೋಮುವಾದದ ಕರಾಳ ಮುಖಗಳು, ಹರ್ಷಮಂದರ್‍ ಬರಹಗಳು (ಸಹಲೇಖಕ: ಕೆ. ಫಣಿರಾಜ್), ಬಹುವಚನ ಭಾರತ ಮಂತಾದವು ಅವರ ಪ್ರಕಟಿತ ಕೃತಿಗಳಲ್ಲಿ ಸೇರಿವೆ. 

ರಾಜಶೇಖರ ಅವರು ತಮ್ಮ  ‘ಬಹುವಚನ ಭಾರತ’ ಕೃತಿಗೆ “ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ 2015ರ ಸಾಲಿನಲ್ಲಿ ಪ್ರಕಟಿಸಿದ್ದ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದರು.

ರಾಜಶೇಖರ ಅವರಿಗೆ 75 ತುಂಬಿದ ನೆನಪಿಗಾಗಿ ಪಟ್ಟಾಭಿರಾಮ ಸೋಮಯಾಜಿ ಅವರ ಸಂಪಾದಕತ್ವದಲ್ಲಿ ಅಭಿನಂದನಾ ಗ್ರಂಥವನ್ನು ಹೊರತರಲಾಗಿತ್ತು.

ಜಿ ರಾಜಶೇಖರ ಅವರು 2022ರ ಜುಲೈ 20ರಂದು ಈ ಲೋಕವನ್ನಗಲಿದರು. 

On the birth anniversary of great scholar and writer G. Rajashekhar 🌷🙏🌷

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ