ಜಿ. ರಾಜಶೇಖರ್
ಜಿ. ರಾಜಶೇಖರ್
ಜಿ. ರಾಜಶೇಖರ್ ಕನ್ನಡ ಸಾಹಿತ್ಯಲೋಕದ ಪ್ರಖ್ಯಾತ ವಿಮರ್ಶಕರೆನಿಸಿದವರು.
ಜಿ. ರಾಜಶೇಖರ ಅವರು 1946ರಲ್ಲಿ ಜನಿಸಿದರು. ಉಡುಪಿಯಲ್ಲಿ ಪದವಿವರೆಗಿನ ವಿದ್ಯಾಭ್ಯಾಸ ನಡೆಸಿ ಕೆಲಕಾಲ ಶಿಕ್ಷಕರಾಗಿ ಕೆಲಸಮಾಡಿ ಎಲ್ಐಸಿಯಲ್ಲಿ ಉದ್ಯೋಗಸ್ಥರಾದರು.
ಜಿ. ರಾಜಶೇಖರ ಅವರು ಸಾಹಿತ್ಯ-ಸಮಾಜ-ರಾಜಕಾರಣ ಕುರಿತಂತೆ ಹಾಗೂ ಕೋಮುವಾದವೂ ಸೇರಿದಂತೆ ಸಮಕಾಲೀನ ತುರ್ತಿನ ವಿದ್ಯಮಾನಗಳ ಬಗ್ಗೆ ನಿರಂತರವಾಗಿ ಬರೆಯತ್ತ ಬಂದಿದ್ದರು.
ಜಿ . ರಾಜಶೇಖರ ಸಂಘಟನೆಯೊಳಗಿದ್ದೇ ಸೊವಿಯತ್ ರಷ್ಯಾದಲ್ಲಿ ಕಮ್ಯುನಿಷ್ಟರಿಂದಾದ ನರಮೇಧವನ್ನು ಅತ್ಯುಗ್ರ ಮಾತುಗಳಲ್ಲಿ ಖಂಡಿಸಿದವರು . ಅಡಿಗರ ಕಾವ್ಯದ ಪ್ರತಿಗಾಮಿತನವನ್ನು ತಿರಸ್ಕರಿಸುತ್ತಲೇ ಅದರ ಹೊರತಾದ ಕಾವ್ಯದ ನಿಜವಾದ ಸತ್ವವನ್ನು ತೋರಿಸಿಕೊಟ್ಟವರು. ಅವರ ಬಗ್ಗೆ ಪಿ. ಲಂಕೇಶ್ “ನಮ್ಮ ರಾಜಶೇಖರ ಎಷ್ಟು ಒಳ್ಳೆಯ ವಿಚಾರವಂತ . ನಿಷ್ಟುರತೆ ಮತ್ತು ಬದುಕಿನ ಬಗ್ಗೆ ಪ್ರೀತಿಯನ್ನು ಇಟ್ಟುಕೊಂಡ ಆತ ಶ್ರೇಷ್ಠ ಚಿಂತನಕಾರ ಎನ್ನುವುದು ನನಗೆ ಹೆಮ್ಮೆಯನ್ನುಂಟು ಮಾಡಿದೆ" ಎನ್ನುತ್ತಿದ್ದರು.
ಸಮಕಾಲೀನ ಕನ್ನಡದ ಪ್ರಮುಖ ವಿಮರ್ಶಕ- ಚಿಂತಕರೆಂದು ಮನ್ನಣೆ ಗಳಿಸಿರುವ ರಾಜಶೇಖರ ಅವರು ಎಡಪಂಥೀಯ ಧೋರಣೆಯನ್ನು ನಿಷ್ಠುರ ಆತ್ಮವಿಮರ್ಶೆಯೊಂದಿಗೆ ಕಸಿ ಮಾಡಿದವರು. ಕಾಗೋಡು ಸತ್ಯಾಗ್ರಹ, ಪರಿಸರ ಮತ್ತು ಸಮಾಜವಾದ, ಬರ್ಟೊಲ್ಟ್ ಬ್ರೆಕ್ಟ್ ಪರಿಚಯ, ದಾರು ಪ್ರತಿಮ ನ ಪೂಜಿವೇ (ಅನುವಾದ), ಕೋಮುವಾದದ ಕರಾಳ ಮುಖಗಳು, ಹರ್ಷಮಂದರ್ ಬರಹಗಳು (ಸಹಲೇಖಕ: ಕೆ. ಫಣಿರಾಜ್), ಬಹುವಚನ ಭಾರತ ಮಂತಾದವು ಅವರ ಪ್ರಕಟಿತ ಕೃತಿಗಳಲ್ಲಿ ಸೇರಿವೆ.
ರಾಜಶೇಖರ ಅವರು ತಮ್ಮ ‘ಬಹುವಚನ ಭಾರತ’ ಕೃತಿಗೆ “ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ 2015ರ ಸಾಲಿನಲ್ಲಿ ಪ್ರಕಟಿಸಿದ್ದ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದರು.
ರಾಜಶೇಖರ ಅವರಿಗೆ 75 ತುಂಬಿದ ನೆನಪಿಗಾಗಿ ಪಟ್ಟಾಭಿರಾಮ ಸೋಮಯಾಜಿ ಅವರ ಸಂಪಾದಕತ್ವದಲ್ಲಿ ಅಭಿನಂದನಾ ಗ್ರಂಥವನ್ನು ಹೊರತರಲಾಗಿತ್ತು.
ಜಿ ರಾಜಶೇಖರ ಅವರು 2022ರ ಜುಲೈ 20ರಂದು ಈ ಲೋಕವನ್ನಗಲಿದರು.
Respects to departed soul scholar and writer G. Rajashekhar 🌷🙏🌷
ಕಾಮೆಂಟ್ಗಳು