ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಪಂಚಮಿ ಹಬ್ಬ


 ಪಂಚಮಿ ಹಬ್ಬ ಉಳಿದಾವ ದಿನ ನಾಕ
ಅಣ್ಣ ಬರಲಿಲ್ಲ ಯಾಕ ಕರಿಲಾಕ

ನನ್ನ ತವರೂರು ಗೋಕುಲ ನಗರ
ನನ್ನ ಅಣ್ಣಯ್ಯ ದೊಡ್ಡ ಸಾಹುಕಾರ
ಮನಿ ಎಂಥದ್ದು ರಾಜಮಂದಿರ
ಹ್ಯಾಂಗ ಆದೀತ ಬಿಟ್ಟು ಇರಲಾಕ

ಮುತ್ತಿನಂತಾಕಿ ಆಕಿ ನನ್ನ ಅತ್ತೀಗಿ
ಪ್ರೀತಿ ಭಾಳ ನನ್ನ ಮ್ಯಾಲ ಅವಳೀಗಿ
ಬಿಟ್ಟಳೇನಮ್ಮ ಬಿಟ್ಟು ಇರಲಾಕ
ಅಣ್ಣ ಬರಲಿಲ್ಲ ಯಾಕ ಕರಿಲಾಕ

ನನ್ನ ತವರಲ್ಲಿ ಪಂಚಮಿ ಭಾರಿ
ಮಣ ತೂಕಾದ ಬೆಲ್ಲ ಕೊಬ್ಬಾರಿ
ಎಳ್ಳು ಅವಲಕ್ಕಿ ತಂಬಿಟ್ಟು ಸೂರಿ
ನಾನು ತಿನುವಾಕಿ ಅಲ್ಲೆ ಮನ ಸಾರಿ

ಸಾಹಿತ್ಯ: ಆನಂದಕಂದ

Photo courtesy: Illayaraja

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ