ಎಚ್. ಎಸ್. ಅನುಪಮಾ
ವೃತ್ತಿಯಲ್ಲಿ ವೈದ್ಯರಾದ ಡಾ. ಎಚ್. ಎಸ್. ಅನುಪಮಾ ಕನ್ನಡ ಸಾಹಿತ್ಯ ಲೋಕದ ಹೆಸರಾಂತಬರಹಗಾರ್ತಿ.
ಫೆಬ್ರುವರಿ 6 ಅನುಪಮಾ ಅವರ ಜನ್ಮದಿನ. ಅನುಪಮಾ ಶಿಕ್ಷಕ ವೃತ್ತಿಯ, ಸಾಂಪ್ರದಾಯಿಕಮನಃಸ್ಥಿತಿಯ ತಾಯ್ತಂದೆಯರ ಮಗಳಾಗಿ ಹುಟ್ಟಿದರು. ತಂದೆಯ ಊರು ಶಿವಮೊಗ್ಗ ಜಿಲ್ಲೆಯತೀರ್ಥಹಳ್ಳಿ ತಾಲೂಕಿನ ಹೆಬ್ಬಾಗಿಲು. ತಾಯಿ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಕಣಕಟ್ಟೆಯವರು. ಅವರಿಬ್ಬರು ಪ್ರೌಢಶಾಲೆಯಲ್ಲಿ ಶಿಕ್ಷಕ, ಶಿಕ್ಷಕಿಯರಾಗಿ ಕೆಲಸ ಮಾಡುತ್ತವರ್ಗಾವಣೆಗೊಳಗಾಗುತ್ತ ಇದ್ದದರಿಂದ ಇವರ ವಿದ್ಯಾಭ್ಯಾಸ ಮೂರ್ನಾಲ್ಕು ಜಿಲ್ಲೆಗಳ ಹಳ್ಳಿಗಳಲ್ಲಿಆಯಿತು. ಯಾವುದೋ ಒಂದು ಊರಿನ, ಒಂದು ಜಾತಿಯ ಕೇರಿಯಲ್ಲಿ ತಾನು ಬೆಳೆಯಲಿಲ್ಲಎನ್ನುವುದು ಬಾಲ್ಯಕಾಲ ತಮಗಿತ್ತ ಕೊಡುಗೆಯೆಂದೇ ಅನುಪಮಾ ಭಾವಿಸಿದ್ದಾರೆ.
ಅನುಪಮಾ ಮನೆಗೆ ತಂದೆಯವರು ತರುತ್ತಿದ್ದ ಪತ್ರಿಕೆ ನಿಯತಕಾಲಿಕಗಳನ್ನೆಲ್ಲ ಓದುತ್ತಿದ್ದರು. ಲಂಕೇಶ್ ಪತ್ರಿಕೆ ಓದುವಾಗ ಲಂಕೇಶರ ಬರಹದ ರೀತಿ ಬಹಳ ಮೆಚ್ಚುಗೆಯಾಗುತ್ತಿತ್ತು. ಏಳನೇತರಗತಿಯಲ್ಲಿರುವಾಗ ಇವರ ಮನೆಯ ಪ್ರೀತಿಯ ಮೊಲ ಶೆಲ್ಲಿಯು ನಾಯಿ ಬಾಯಿಗೆ ತುತ್ತಾದಾಗದುಃಖದಿಂದ ಬರೆದ ಪದ್ಯ
'ವನಿತಾ' ಪತ್ರಿಕೆಯಲ್ಲಿ ಪ್ರಕಟಗೊಂಡು ಐದು ರೂಪಾಯಿ ಬಹುಮಾನದ ಸಂಭಾವನೆ ಸಂದಿತ್ತು! ನಂತರ ಪದ್ಯ ಬರೆಬರೆದು ಯಾರಿಗೂ ತೋರಿಸದೇ ಬಚ್ಚಿಟ್ಟುಕೊಂಡು ಡೈರಿ ತುಂಬಿಸುತ್ತಹೋದರು. ಅಂದಿನ ದಿನಗಳಲ್ಲಿ ಊರಿನಲ್ಲಿ ಕಂಡ ಹೆಣ್ಣುಮಕ್ಕಳ ದಾರುಣ ಪರಿಸ್ಥಿತಿಯ ಬದುಕುಇವರ ಮೇಲೆ ಅಪಾರ ಪ್ರಭಾವ ಬೀರಿತ್ತು.
ಪಿಯುಸಿಗೆ ಶಿವಮೊಗ್ಗದ ಡಿವಿಎಸ್ ಕಾಲೇಜು ಸೇರಿದರು. ಇವರು ವಿಜ್ಞಾನ ವಿದ್ಯಾರ್ಥಿಯಾದರೂಕಾಲೇಜಿನಲ್ಲಿ ಕನ್ನಡ ಬೋಧಿಸುತ್ತಿದ್ದ ಶಿವಮೊಗ್ಗ ಮುನೀರ್, ರಹಮತ್ ತರೀಕೆರೆ ಅವರಪ್ರೋತ್ಸಾಹದಿಂದ ಕವನಸ್ಪರ್ಧೆ, ಭಾಷಣ, ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳಲ್ಲಿಪಾಲ್ಗೊಳ್ಳುತ್ತಿದ್ದರು. ಮುಂದೆ ಬಳ್ಳಾರಿಯ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಪ್ರವೇಶದೊರೆಯಿತು. ಓದಿನ ದಿನಗಳಲ್ಲೂ ಬರೆದರು. ಮುಂದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರತಾಲೂಕಿನ ಕವಲಕ್ಕಿಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸಲು ತೊಡಗಿದರು. ವೃತ್ತಿ ಮತ್ತುವೈವಾಹಿಕ ಜೀವನದಲ್ಲಿ ಬರೆಯಲು ಪುರಸೊತ್ತಿಲ್ಲದಿದ್ದರೂ ಕ್ರಮೇಣ ಬರಹಕ್ಕಿಳಿದರು. 'ಕೆಂಡಸಂಪಿಗೆ'ಯಲ್ಲಿ ಬರೆದರು. ಅನೇಕ ಪತ್ರಿಕೆಗಳಲ್ಲೂ ಬರೆದರು.
"ಸಾಹಿತ್ಯ ಮತ್ತು ವೈದ್ಯಕೀಯ ಎರಡೂ ಬೇರೆ-ಬೇರೆ ಅಲ್ಲ. ಅವು ಒಂದಕ್ಕೊಂದು ಪೂರಕ. ಏಕೆಂದರೆ ವೈದ್ಯರಿಗೆ ಸಾಹಿತ್ಯಕೃಷಿಗೆ ಬಿತ್ತಲು ಬೇಕಾದ ಅತ್ಯಮೂಲ್ಯ ಬೀಜಗಳು ವಿಪುಲವಾಗಿದೊರೆಯುತ್ತವೆ. ಬದುಕಿನ ಎಲ್ಲ ಬಣ್ಣಗಳನ್ನು, ಮನುಷ್ಯ ಸ್ವಭಾವಗಳನ್ನು ನೇರವಾಗಿ ಹತ್ತಿರದಿಂದನೋಡಲು ವೈದ್ಯವೃತ್ತಿಯಲ್ಲಿ ಸಾಧ್ಯವಿದೆ. ಸಾಹಿತಿ ಅಥವಾ ಸಾಹಿತಿಯ ಮುಖ್ಯ ಉದ್ದೇಶಸಮಾಜದಲ್ಲಿ ಇರುವ ನೋವು, ದುಃಖಗಳನ್ನು ಸೂಕ್ಷ್ಮವಾಗಿ ಗ್ರಹಿಸಿ ಜನಸಮುದಾಯಕ್ಕೆಹೇಳುವುದು. ವೈದ್ಯರು ಮಾಡುವುದೂ ಅದನ್ನೇ. ಹಾಗಾಗಿ ವೃತ್ತಿನಿರತರಾಗಿಯೂಚಳವಳಿಕಾರಳಾಗಲು ಚಿಮ್ಮುಹಲಗೆಯಂತೆ ವೈದ್ಯಕೀಯವು ಒದಗಿಬರುತ್ತದೆ. ಹೀಗೆ ಪ್ರತಿನಿತ್ಯಹಳ್ಳಿಯ ಜನರ ಜೊತೆಗಿನ ಒಡನಾಟ ಓದುಗಳಾದ ನನ್ನನ್ನು ಬರಹಗಾರ್ತಿಯಾಗಿ, ಸಂಘಟಿತಚಟುವಟಿಕೆಯಲ್ಲಿ ವಿಶ್ವಾಸವುಳ್ಳವಳನ್ನಾಗಿ ನನ್ನ ವೃತ್ತಿಯೂ ರೂಪಿಸಿತು" ಎನ್ನುತ್ತಾರೆ ಅನುಪಮಾ.
ಅನುಪಮಾ ಅವರು ಸಮಾನಾಸಕ್ತರೊಡನೆ 2007-08ರ ವೇಳೆಗೆ ಸಾಹಿತ್ಯಿಕ, ಸಾಂಸ್ಕೃತಿಕಕಾರ್ಯಕ್ರಮಗಳನ್ನು ಹೊನ್ನಾವರದಲ್ಲಿ ಸಂಘಟಿಸಲು ಆರಂಭಿಸಿದರು. ಸಂಪರ್ಕ ಜಾಲಬೆಳೆಯುತ್ತ ಹೋಯಿತು. ಸಾಹಿತಿಗಳ, ಹೋರಾಟಗಾರರ, ಸಂಘಟನೆಗಳ ನಂಟು ಬೆಳೆಯುತ್ತಹೋದಹಾಗೆ ವೈಚಾರಿಕವಾಗಿ ಬೆಳೆಯತೊಡಗಿದರು. ಅಂಬೇಡ್ಕರ್ ಗಾಢವಾಗಿ ಪ್ರಭಾವಿಸಿದರು. ಇನ್ನಿತರ ಬರಹಗಾರರ ಬರಹಗಳೂ ಪ್ರಭಾವಿಸುತ್ತ ಹೋದವು.
ಹೀಗೆ ಗಾಢ ಬದುಕಿನ ಅನುಭವ, ನೋಟ, ವೃತ್ತಿ, ಸಂಘಟನೆ, ಓದು ಹೀಗೆ ಬಹುಮುಖಿತ್ವ ಏಕತ್ರನೆಲೆಯಾಗಿ ಸಂಪೂರ್ಣ ಅನುಭವದ ಸೆಲೆಯಲ್ಲಿ ಡಾ. ಎಚ್. ಎಸ್. ಅನುಪಮಾ ಅವರಬರಹಗಳು ಪೂರ್ಣತೆ ಗಳಿಸಿಕೊಂಡಿವೆ.
ವಿಫುಲವಾದ ಸಾಹಿತ್ಯ ರಚನೆ ಮಾಡಿರುವ ಅನುಪಮಾ ಅವರ ಬರಹಗಳಲ್ಲಿ ಕಾಡುಹಕ್ಕಿಯಹಾಡು, ಸಹಗಮನ, ಬುದ್ಧ ಚರಿತೆ (ಖಂಡ ಕಾವ್ಯ), ಸಬರಮತಿ (ಕಥನ ಕಾವ್ಯ), ನೆಗೆವ ಪಾದದಜಿಗಿತ ಸೇರಿದಂತೆ ಹಲವು ಕವನಸಂಕಲನಗಳು; ಬೆಳಗಿನೊಳಗು ಮಹಾದೇವಿಯಕ್ಕ ಕಾದಂಬರಿ; ಹೂವರಳಿದ್ದಕ್ಕೆ ಯಾಕೆ ಸಾಕ್ಷಿ?, ಚಿವುಟಿದಷ್ಟೂ ಚಿಗುರು, ಕೋವಿಡ್: ಡಾಕ್ಟರ್ ಡೈರಿ - ಗ್ರಾಮಭಾರತದ ಕಥೆಗಳು ಮುಂತಾದ ಕಥಾಸಂಕಲನಗಳು; ಡಾ. ಬಾಬಾಸಾಹೇಬ್ ಅಂಬೇಡ್ಕರ್ – ಕಿರು ಜೀವನ ಚರಿತ್ರೆ , ಮೋಚಕನ ಹೆಜ್ಜೆಗಳು - ಡಾ. ಬಿ. ಆರ್. ಅಂಬೇಡ್ಕರ್ ಜೀವನ ಚರಿತ್ರೆ, ನಾನುಕಸ್ತೂರ್ – ಕಸ್ತೂರಬಾ ಜೀವನ ಕಥನ, ಜನ ಸಂಗಾತಿ ಭಗತ್, ಜ್ಯೋತಿಬಾ ಫುಲೆ, ಕ್ರಾಂತಿ ಜ್ಯೋತಿಸಾವಿತ್ರಿಬಾಯಿ ಫುಲೆ ಚರಿತ್ರೆ ಸೇರಿದಂತೆ ಹಲವು ಜೀವನ ಚರಿತ್ರೆಗಳು; ಮಹಿಳೆ, ಸಂತಾನೋತ್ಪತ್ತಿಮತ್ತು ಮಾನಸಿಕ ಆರೋಗ್ಯ, ಮುಟ್ಟು – ವಿಜ್ಞಾನ, ಸಂಸ್ಕೃತಿ ಮತ್ತು ಅನುಭವ ಮುಂತಾದ ವೈದ್ಯಕೀಯ ಬರಹಗಳ ಸಂಕಲನಗಳು; ನೈಲ್ ನದಿಯಗುಂಟ ಶರಾವತಿಯನರಸುತ್ತ, ಅಂಡಮಾನ್: ಕಂಡ ಹಾಗೆ, ಚೆಗೆವಾರನ ನೆಲದಲ್ಲಿ ಸೇರಿದಂತೆ ಮೂರು ಪ್ರವಾಸಕಥನ, ಬುದ್ಧಬೆಳಕಿನಲ್ಲಿ ಅಂಬೇಡ್ಕರ್ ಭಾರತ: ಲೇಖನ ಸಂಗ್ರಹ, ಸಂವಿಧಾನ ಮತ್ತು ಮಹಿಳೆ, ಹೆಣ್ಣು ಹೆಜ್ಜೆ(ಮಹಿಳಾ ಮಾದರಿ ಮತ್ತು ಮಾರ್ಗ), ಅಭಿವ್ಯಕ್ತಿ ಸ್ವಾತಂತ್ರ್ಯ ವಿವಿಧ ಆಯಾಮಗಳು; ಮೋಟಾರ್ ಸೈಕಲ್ ಡೈರಿ, ಹಲವು ಅನುವಾದ, ಸಂಪಾದನೆ, ಸಹಸಂಪಾದನೆ ಸೇರಿದಂತೆ 59 ಕೃತಿಗಳನ್ನು ಪ್ರಕಟಿಸಿದ್ದು, 60ನೇ ಕೃತಿ ಶೀಘ್ರವೇ ಬರಲಿದೆ.
ಡಾ. ಅನುಪಮಾ ಅವರಿಗೆ ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳ ಸೇವೆಗಾಗಿ ಕರ್ನಾಟಕ ಸಾಹಿತ್ಯಅಕಾಡೆಮಿ ಪ್ರಶಸ್ತಿ, ರಮಾಬಾಯಿ ಅಂಬೇಡ್ಕರ್ ಪುಸ್ತಕ ಬಹುಮಾನ, ಸಕಾಲಿಕ ಸಾಹಿತ್ಯ ಪ್ರಶಸ್ತಿ, ಎಚ್. ಶಾಂತಾರಾಂ ಪ್ರಶಸ್ತಿ, ದೆಹಲಿ ಕರ್ನಾಟಕ ಸಂಘ ಪ್ರಶಸ್ತಿ, ರಾಜಲಕ್ಷ್ಮಿ ಬರಗೂರು ಪ್ರಶಸ್ತಿ, ಐಎಂಎ ಕನ್ನಡ ವೈದ್ಯ ಬರಹಗಾರರ ಸಂಘದ ಪ್ರಶಸ್ತಿ, ಶಾಂತಾದೇವಿ ಕಣವಿ ಕಥಾ ಪ್ರಶಸ್ತಿಸೇರಿದಂತೆ ಅನೇಕ ಪ್ರಶಸ್ತಿ ಗೌರವಗಳು ಸಂದಿವೆ.
Doctor, writer and activist Dr. H. S. Anupama
ಕಾಮೆಂಟ್ಗಳು