ವಿದ್ಯಾರಶ್ಮಿ ಪೆಲತ್ತಡ್ಕ
ವಿದ್ಯಾರಶ್ಮಿ ಪೆಲತ್ತಡ್ಕ
ವಿದ್ಯಾರಶ್ಮಿ ಪೆಲತ್ತಡ್ಕ ಪತ್ರಕರ್ತೆಯಾಗಿ ಮತ್ತು ಬಹುಮುಖಿ ಬರಹಗಾರ್ತಿಯಾಗಿ ಹೆಸರಾಗಿದ್ದಾರೆ.
ಜುಲೈ 16 ವಿದ್ಯಾರಶ್ಮಿ ಅವರ ಜನ್ಮದಿನ. ಇವರು ದಕ್ಷಿಣ ಕನ್ನಡ ಮತ್ತು ಕಾಸರಗೋಡು ಗಡಿ ಭಾಗದ ಪೆಲತ್ತಡ್ಕದವರು. ಇವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ.
ವಿದ್ಯಾರಶ್ಮಿ ಪೆಲತ್ತಡ್ಕ ಅವರು ಕನ್ನಡಪ್ರಭ, ಸುವರ್ಣ ನ್ಯೂಸ್, ವಿಜಯ ನೆಕ್ಸ್ಟ್ ಮುಂತಾದ ಪತ್ರಿಕೆಗಳಲ್ಲಿ ಕೆಲಸ ಮಾಡಿದ ನಂತರದಲ್ಲಿ, ವಿಜಯ ಕರ್ನಾಟಕದ ಪುರವಣಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವಿದ್ಯಾರಶ್ಮಿ ಪೆಲತ್ತಡ್ಕ ಅವರ ಬಹುಮುಖಿ ಬರಹಗಳು ನಾಡಿನ ಪ್ರಸಿದ್ಧ ನಿಯತಕಾಲಿಕಗಳು ಮತ್ತು ಅಂತರಜಾಲದಲ್ಲಿ ನಿರಂತರ ಪ್ರಕಾಶಿಸುತ್ತಿವೆ. ಅವರ ಅಂಕಣ ಬರಹಗಳೂ ಜನಪ್ರಿಯ.
ವಿದ್ಯಾರಶ್ಮಿ ಪೆಲತ್ತಡ್ಕ ಅವರ ಪ್ರಕಟಿತ ಕೃತಿಗಳಲ್ಲಿ 'ಗೌರೀದುಃಖ’ ಮತ್ತು 'ಕೆರೆ-ದಡ' ಕವನ ಸಂಕಲನಗಳು ಸೇರಿವೆ. ಇವರು ನಿರೂಪಿಸಿರುವ ಯಕ್ಷಗಾನ ಕ್ಷೇತ್ರದ ಪ್ರಥಮ ಮಹಿಳಾ ಭಾಗವತರಾದ ಲೀಲಾವತಿ ಬೈಪಾಡಿತ್ತಾಯ ಅವರ ಆತ್ಮಕಥೆ 'ಯಕ್ಷ ಗಾನ ಲೀಲಾವಳಿ' ಕೃತಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಪುಸ್ತಕ ಬಹುಮಾನ ಸಂದಿದೆ.
ವಿದ್ಯಾರಶ್ಮಿ ಪೆಲತ್ತಡ್ಕ ಅವರಿಗೆ ವಿ.ಕೃ. ಗೋಕಾಕ್ ವಾಙ್ಮಯ ಟ್ರಸ್ಟ್ ಅವರಿಂದ ವಿ. ಕೃ. ಗೋಕಾಕರ ಕಾವ್ಯಗಳ ಅಧ್ಯಯನಕ್ಕಾಗಿನ ಫೆಲೊಷಿಪ್ ಸಂದಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ 'ಮಯೂರವರ್ಮ ಸಾಹಿತ್ಯ ಪ್ರಶಸ್ತಿ' ಸಂದಿದೆ.
ಪ್ರತಿಭಾನ್ವಿತ ಪತ್ರಕರ್ತೆ ಮತ್ತು ಬರಹಗಾರ್ತಿ ವಿದ್ಯಾರಶ್ಮಿ ಪೆಲತ್ತಡ್ಕ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಹಾರೈಕೆಗಳು.
Happy birthday Vidyarashmi Pellathadka 🌷🌷🌷
ಕಾಮೆಂಟ್ಗಳು