ಸುಮಿತ್ರಾ ಐತಾಳ್
ಸುಮಿತ್ರಾ ಐತಾಳ್ ಸಂಸ್ಮರಣೆ
ಕುಂದಾಪುರದ ಸುಮಿತ್ರಾ ಐತಾಳ್ ಸಾಹಿತಿಯಾಗಿ ಮತ್ತು ಶಿಕ್ಷಕಿಯಾಗಿ ಹೆಸರಾಗಿದ್ದವರು.
ಕಿರಿಮಂಜೇಶ್ವರ ಸರಕಾರಿ ಪ್ರೌಢ ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿದ್ದ ಸೇವೆ ಸಲ್ಲಿಸುತ್ತಿದ್ದ ಸುಮಿತ್ರಾ ಐತಾಳ್ ಅವರು ಕುಂದಾಪ್ರ ಕನ್ನಡದಲ್ಲಿ ರೂಪಕ, ನಾಟಕ, ಸಾಹಿತ್ಯ ರಚನೆ ಮಾಡಿ ಕುಂದಗನ್ನಡಕ್ಕೆ ಅಪಾರ ಸೇವೆ ಸಲ್ಲಿಸಿದ್ದರು.
ಬಿ.ಇಡ್, ಎಂ.ಎ ವ್ಯಾಸಂಗ ಪೂರೈಸಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುವುದರ ಜೊತೆಗೆ ಸಾಹಿತ್ಯಿಕ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಸುಮಿತ್ರಾ ಅವರು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಭಾವಗಾನ, ಅಂತರಗಂಗೆ, ಗಡಿಯಾರ, ಹಣತೆ, ಮೌನರತಿ ಕವನ ಸಂಕಲನಗಳು ಹಾಗೂ ಫಲಿತಾಂಶ ಕಥಾಸಂಕಲನವನ್ನು ಪ್ರಕಟಿಸಿದ್ದರು. ವಿಜಯ ಕರ್ನಾಟಕ, ಕುಂದಪ್ರಭ, ಕುಂದಾಪುರ ಮಿತ್ರ ಪತ್ರಿಕೆಗಳಲ್ಲಿ ಅವರ ಲೇಖನಗಳು ಪ್ರಕಟಗೊಂಡಿದ್ದವು. ’ಬಾ ಗೆಳತಿ’ ಮಹಿಳಾ ಸ್ಪಂದನ ಕಾರ್ಯಕ್ರಮ, ದೂರದರ್ಶನದಲ್ಲಿ ಸಾಹಿತ್ಯದ ನುಡಿ ಕಾರ್ಯಕ್ರಮದಲ್ಲಿ ಕೂಡಾ ಅವರು ಭಾಗವಹಿಸಿದ್ದರು.
ಸುಮಿತ್ರಾ ಐತಾಳ್ ಅವರಿಗೆ ಸಾಹಿತ್ಯ ಹಾಗೂ ಶೈಕ್ಷಣಿಕ ಕ್ಷೇತ್ರದ ಸೇವೆಗಾಗಿ ಹಲವು ಪ್ರಶಸ್ತಿಗಳು ಸಂದಿದ್ದವು.
ಸುಮಿತ್ರಾ ಐತಾಳ್ ಅವರು 2022ರ ಡಿಸೆಂಬರ್ 1ರಂದು ತಮ್ಮ 58ನೇ ವಯಸ್ಸಿನಲ್ಲಿ ನಿಧನರಾದರು.
Remembering writer Sumithra Aithal
ಕಾಮೆಂಟ್ಗಳು