ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ರಾಜಶೇಖರ ಕುಕ್ಕುಂದಾ


 ರಾಜಶೇಖರ ಕುಕ್ಕುಂದಾ


ರಾಜಶೇಖರ ಕುಕ್ಕುಂದಾ ಅವರು ಸಾಹಿತ್ಯ ಕ್ಷೇತ್ರದಲ್ಲಿ, ಅದರಲ್ಲೂ ವಿಶೇಷವಾಗಿ ಮಕ್ಕಳ ಸಾಹಿತ್ಯಲೋಕದಲ್ಲಿ ಹೆಸರಾಗಿದ್ದಾರೆ. 

ಜುಲೈ 16, ರಾಜಶೇಖರ ಕುಕ್ಕುಂದಾ ಅವರ ಹುಟ್ಟುಹಬ್ಬ.  ರಾಜಶೇಖರ ಕುಕ್ಕುಂದಾ ಕಾವ್ಯನಾಮದೊಂದಿಗೆ ಬರೆಯುವ ರಾಜಶೇಖರ ಅಲ್ಲೂರಕರ್ ಅವರು ಮೂಲತಃ ಗುಲ್ಬರ್ಗಾದವರು.   ಪ್ರಸಕ್ತದಲ್ಲಿ ಇವರು ಬಾಗಲಕೋಟೆಯ ಬಸವೇಶ್ವರ ಎಂಜಿನೀಯರಿಂಗ್ ಕಾಲೇಜಿನಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. 

ವಿಶೇಷವಾಗಿ ಮಕ್ಕಳ ಸಾಹಿತ್ಯಲೋಕದಲ್ಲಿ ಪ್ರಸಿದ್ಧರಾಗಿರುವ ರಾಜಶೇಖರ ಕುಕ್ಕುಂದಾ  ಅವರ ಬರಹಗಳು ನಾಡಿನ ಪ್ರಸಿದ್ಧ ನಿಯತಕಾಲಿಕಗಳನ್ನು ನಿರಂತರವಾಗಿ ಅಲಂಕರಿಸುತ್ತಿವೆ. ಆಕಾಶವಾಣಿಯಲ್ಲಿಯೂ ಇವರ ಮಕ್ಕಳ ಧಾರಾವಾಹಿ ಮತ್ತು ಕವಿತೆಗಳು ಪ್ರಸಾರಗೊಂಡಿವೆ.

ರಾಜಶೇಖರ ಕುಕ್ಕುಂದಾ ಅವರ ಪ್ರಕಟಿತ ಕೃತಿಗಳಲ್ಲಿ ಚೆಲುವ ಚಂದಿರ,  ಗೋಲಗುಮ್ಮಟ,  ಪುಟಾಣಿ ಪ್ರಾಸಗಳು (ಮಕ್ಕಳ ಕವನ ಸಂಕಲನಗಳು), ಸೋನ ಪಾಪಡಿ ಸೇರಿವೆ.  ಇವರು ತಾಂತ್ರಿಕ ವಿಷಯಗಳ ಕುರಿತೂ  ಪುಸ್ತಕಗಳನ್ನು ರಚಿಸಿದ್ದಾರೆ. 

ರಾಜಶೇಖರ ಕುಕ್ಕುಂದಾ ಅವರ ಕವಿತೆಗಳು ಸಿ. ಬಿ. ಎಸ್. ಇ. ಕನ್ನಡ ಭಾಷೆಯ ಪಠ್ಯದಲ್ಲಿ, ಕರ್ನಾಟಕ ಮತ್ತು ಮಹಾರಾಷ್ಟ್ರದ ಪಠ್ಯಪುಸ್ತಕಗಳಲ್ಲಿ ಮತ್ತು ಶಿಶುಗೀತೆಯ ಅಲ್ಬಂಗಳಲ್ಲಿ ಸೇರಿವೆ. ಇವರು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. 

ರಾಜಶೇಖರ ಕುಕ್ಕುಂದಾ ಅವರಿಗೆ ಪ್ರಜಾವಾಣಿ ದಿನಪತ್ರಿಕೆಯ ದೀಪಾವಳಿ ಶಿಶು ಕಾವ್ಯ ಸ್ಪರ್ಧೆಯಲ್ಲಿ ಹಲವು ಬಾರಿ ಬಹುಮಾನ, ಶಿವಮೊಗ್ಗದ ಕರ್ನಾಟಕ ಸಂಘವು ಮಕ್ಕಳ ಸಾಹಿತ್ಯಕ್ಕೆ ನೀಡುವ 2012 ನೇ ಸಾಲಿನ ‘ನಾ ಡಿಸೋಜಾ’ ಪುರಸ್ಕಾರ, 2013 ನೇ ಸಾಲಿನ ‘ಅಮ್ಮ’ ಪುರಸ್ಕಾರ ಮುಂತಾದ ಅನೇಕ ಗೌರವಗಳು ಸಂದಿವೆ. 

ರಾಜಶೇಖರ ಕುಕ್ಕುಂದಾ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಹಾರೈಕೆಗಳು.  ನಮಸ್ಕಾರ. 

Happy birthday R S Allurkar Kukkunda 🌷🌷🌷

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!
Emotions
Copy and paste emojis inside comment box

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ