ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಆದದ್ದೆಲ್ಲ ಒಳಿತೇ ಆಯಿತು

 

ಆದದ್ದೆಲ್ಲ ಒಳಿತೇ ಆಯಿತು ನಮ್ಮ
ಶ್ರೀಧರನ ಸೇವೆಗೆ ಸಾಧನ ಸಂಪತ್ತಾಯಿತು   ||ಪ||

ದಂಡಿಗೆ ಬೆತ್ತ ಹಿಡಿಯುವುದಕ್ಕೆ
ಮುಂದೆ ಬಾಗಿ ನಾಚುತಲಿದ್ದೆ
ಹೆಂಡತಿ ಸಂತತಿ ಸಾವಿರ ವಾಗಲಿ
ದಂಡಿಗೆ ಬೆತ್ತ ಹಿಡಿಸಿದಳಯ್ಯ                 ||೧||

ಗೋಪಾಲ ಬುಟ್ಟಿ ಹಿಡಿಯುವುದಕ್ಕೆ
ಭೂಪತಿ ಎಂದು ಗರ್ವಿಸುತ್ತಿದ್ದೆ
ಆ ಪತ್ನೀಕುಲ ಸಾವಿರವಾಗಲಿ
ಗೋಪಾಲ ಬುಟ್ಟಿ ಹಿಡಿಸಿದಳಯ್ಯ          ||೨||

ತುಳಸೀ ಮಾಲೆ ಹಾಕುವುದಕ್ಕೆ
ಅರಸನೆಂದು ತಿರುಗುತಲಿದ್ದೆ
ಸರಸಿಜಾಕ್ಷ ಶ್ರೀ ಪುರಂದರ ವಿಠಲನು
ತುಳಸಿಮಾಲೆ ಹಾಕಿದನಯ್ಯ                ||೩||

ಚಿತ್ರ : ನವಕೋಟಿ ನಾರಾಯಣ 
ಸಾಹಿತ್ಯ: ಪುರಂದರ ದಾಸರು
ಗಾಯನ: ಎಂ. ಬಾಲಮುರಳಿ ಕೃಷ್ಣ
ಸಂಗೀತ: ಶಿವಪ್ರಸಾದ್
ನಿರ್ದೇಶನ: ಎಸ್. ಕೆ. ಅನಂತಾಚಾರಿ

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ