ಎನ್. ಆರ್. ವಿಶುಕುಮಾರ್
ಎನ್. ಆರ್. ವಿಶುಕುಮಾರ್
ಎನ್. ಆರ್. ವಿಶುಕುಮಾರ್ ಕನ್ನಡ ನಾಡಿನ ಸಾಂಸ್ಕೃತಿಕ ವಲಯ, ಸುದ್ದಿ ಮಾಧ್ಯಮ ಹಾಗೂ ಆಡಳಿತ ಕ್ಷೇತ್ರದಲ್ಲಿ ಹೆಸರಾದವರು.
ನವೆಂಬರ್ 4, ವಿಶುಕುಮಾರ್ ಅವರ ಜನ್ಮದಿನ. ಮಂಡ್ಯದ ನಗುವಿನಹಳ್ಳಿ, ಕನಕಪುರ ಗ್ರಾಮೀಣ ಕಾಲೇಜು, ಮೈಸೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರು ವಿಶ್ವವಿದ್ಯಾಲಯಗಳಲ್ಲಿ ಇವರ ವ್ಯಾಸಂಗ ನಡೆಯಿತು.
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂವಹನ ಸ್ನಾತಕೋತ್ತರ ಪದವೀಧರರಾದ ವಿಶುಕುಮಾರ್ ಅವರು ‘ಪ್ರಜಾವಾಣಿ’ ಬಳಗದ ಪತ್ರಿಕೆಗಳಲ್ಲಿ ಹವ್ಯಾಸಿ ಪತ್ರಕರ್ತರಾಗಿ ಪತ್ರಿಕೋದ್ಯಮಕ್ಕೆ ಕಾಲಿರಿಸಿದರು. ನಂತರ ‘ಲಂಕೇಶ್ ಪತ್ರಿಕೆ’ಯಲ್ಲಿ ರಾಜಕೀಯ ವರದಿಗಾರರಾಗಿದ್ದು ಲಂಕೇಶ್, ಪೂರ್ಣಚಂದ್ರ ತೇಜಸ್ವಿ ಹಾಗೂ ಪ್ರೊ .ಎಂ. ಡಿ . ನಂಜುಂಡ ಸ್ವಾಮಿ ಅವರ ಪ್ರಶಂಸೆಗೆ ಪಾತ್ರರಾಗಿದ್ದರು. ತದನಂತರ ಮಂಡ್ಯ ಜಿಲ್ಲೆಯನ್ನು ಕೇಂದ್ರವಾಗಿಟ್ಟುಕೊಂಡು ‘ಕನ್ನಂಬಾಡಿ’ ಪತ್ರಿಕೆ ಆರಂಭಿಸಿದರು. ತದನಂತರ ವಾರ್ತಾ ಇಲಾಖೆಯಲ್ಲಿ ವೃತ್ತಿ ಆರಂಭಿಸಿದ ವಿಶುಕುಮಾರ್ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ ಮತ್ತು ಕರ್ನಾಟಕ ವಾರ್ತಾ ಮತ್ತು ಪ್ರಸಾರ ಇಲಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುವುದೂ ಸೇರಿದಂತೆ ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಅವರು ಕರ್ನಾಟಕ ಗಾಂಧೀ ಸ್ಮಾರಕ ನಿಧಿಯ ಕಾರ್ಯಾಧ್ಯಕ್ಷರಾಗಿದ್ದಾರೆ.
ವಿಶುಕುಮಾರ್ ಅವರು ದೇಶದ ಎಲ್ಲಾ ರಾಜ್ಯಗಳ ಸಾರ್ವಜನಿಕ ಸಂಪರ್ಕ ಅಧಿಕಾರಿಗಳನ್ನು ಒಳಗೊಂಡ ಸಂಸ್ಥೆಗೆ ಅಧ್ಯಕ್ಷರಾಗಿ ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸಿದವರು. ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ನೀಡುವ ಅತ್ಯುತ್ತಮ ಸಂವಹನಕಾರ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳಿಗೆ ಪಾತ್ರರಾದವರು.
ವಿಶುಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಹಾರೈಕೆಗಳು. ನಮಸ್ಕಾರ.
Happy birthday Vishu Kumar Sir 🌷🙏🌷
ಕಾಮೆಂಟ್ಗಳು